ಸಿಟಿ ರೌಂಡ್ಸ್ ಸಾಗರ: ನಗರಸಭೆ ವ್ಯಾಪ್ತಿಯ ಎಲ್ಲ ಅಸ್ತಿದಾರರು ಅಕ್ಟೋಬರ್ 7ರಿಂದ ತಮ್ಮ ಆಸ್ತಿಗಳನ್ನು ಈ-ಸ್ವತ್ತು ತಂತ್ರಾಂಶದಲ್ಲಿ ದಾಖಲಿಸುವುದು ಕಡ್ಡಾಯವಾಗಿದ್ದು, ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ಯತೀಶ್ ಆರ್. ತಿಳಿಸಿದ್ದಾರೆ.
ನಗರಸಭೆ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ವ್ಯಾಪ್ತಿಯ 23058 ಆಸ್ತಿಗಳಲ್ಲಿ ಕೇವಲ 7108 ಆಸ್ತಿಗಳು ಮಾತ್ರ ಈ-ಸ್ವತ್ತು ಹೊಂದಿದ್ದು, ಉಳಿದ 15ಸಾವಿರಕ್ಕೂ ಹೆಚ್ಚು ಆಸ್ತಿಗಳಿಗೆ ಇನ್ನೂ ಈ-ಸ್ವತ್ತು ಮಾಡಿಸಲಾಗಿಲ್ಲ. ಈ-ಸ್ವತ್ತು ಮಾಡಿದರೆ ಆಸ್ತಿ ಖರೀದಿ, ಮಾರಾಟ, ಭೋಗ್ಯಕ್ಕೆ ಕೊಡುವುದು ಹಾಗೂ ಬ್ಯಾಂಕ್ ಸಾಲದ ಸೌಲಭ್ಯಗಳಂತಹ ವಿವಿಧ ವ್ಯವಹಾರಗಳಲ್ಲಿ ಸುಗಮತೆ ದೊರಕುತ್ತದೆ.
ಈ ಸಂಬಂಧ, ದಸರಾ ಹಬ್ಬದ ನಂತರ ಪ್ರತಿ ವಾರ್ಡ್ನಲ್ಲಿ ಸಭೆಗಳನ್ನು ಆಯೋಜಿಸಿ, ಸ್ಥಳದಲ್ಲಿಯೇ ಅರ್ಜಿಗಳನ್ನು ಸ್ವೀಕರಿಸುವ ಮೂಲಕ ಈ-ಸ್ವತ್ತು ಪ್ರಕ್ರಿಯೆ ತ್ವರಿತಗೊಳಿಸಲಾಗುವುದು ಎಂದು ಅವರು ತಿಳಿಸಿದರು.
More Stories
ಸಾವಿರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ : (ಎಂ ಎಸ್ ಪಿ) ಜಾರಿಗೋಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಸರ್ಕಾರಕ್ಕೆ ಒತ್ತಾಯ..!!
ಸಿಟಿರೌಂಡ್ಸ್ ನ್ಯೂಸ್ ಬಿಗ್ ಇಂಫ್ಯಾಕ್ಟ್ 125 ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ದಾಳಿ 52 ವಾಹನಗಳು ವಶಕ್ಕೆ ..!!
ಸಿಎಲ್ 2 ಮಧ್ಯದಂಗಡಿಗಳಿಗೆ ನಿಯಮಗಳೇ ಇಲ್ಲ : ಮಾಂಸಾಹಾರಿ ಹೋಟೆಲ್ಗಳಲ್ಲಿ ಮಧ್ಯ ಮಾರಾಟಕ್ಕೆ ಕಾನೂನಿನ ಭಯವೇ ಇಲ್ಲ … ಪ್ರತಿನಿತ್ಯ ಅಪಘಾತಗಳೆ …. ಸಾರ್ವಜನಿಕರ ಜೀವಗಳಿಗೆ ಬೆಲೆಯೇ ಇಲ್ಲ …